ದೇವರನ್ನೂ ಬಿಟ್ಟಿಲ್ಲ ಕೊರೋನಾ! ಈ ವರ್ಷ ಪ್ರಸಿದ್ಧ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ.
ಕುಕ್ಕೆ ಸುಬ್ರಹ್ಮಣ್ಯ
ಕುಕ್ಕೆ ಸುಬ್ರಹ್ಮಣ್ಯ
Updated on

ಬೆಂಗಳೂರು: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ.

ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ ರೂಪಾಯಿ ಆದಾಯ ಗಳಿಸುತ್ತದೆ, ಆದರೆ ಈ ವರ್ಷ ಗಳಿಸಿದ್ದು ಕೇವಲ 4.2 ಕೋಟಿ ರೂಪಾಯಿ. ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಪ್ರತಿವರ್ಷ 45ರಿಂದ 50 ಕೋಟಿ ರೂಪಾಯಿ ಆದಾಯವಾಗುತ್ತದೆ, ಆದರೆ ಈ ವರ್ಷ ಆಗಿದ್ದು ಕೇವಲ 4.5 ಕೋಟಿ ರೂಪಾಯಿ. ಇದೇ ವರ್ಷ ಈ ದೇವಾಲಯಗಳು ಇಷ್ಟು ಕಡಿಮೆ ಆದಾಯ ಗಳಿಸಿದ್ದು.

ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟದ ಕಳೆದ ವರ್ಷದ ಆದಾಯ 35.23 ಕೋಟಿ ರೂಪಾಯಿಗಳಾದರೆ ಈ ವರ್ಷ ಕೇವಲ 74 ಲಕ್ಷ ರೂಪಾಯಿ ಗಳಿಸಿದೆ. ದಕ್ಷಿಣದ ಕಾಶಿ ಎಂದು ಕರೆಯಲ್ಪಡುವ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ಕಳೆದ ವರ್ಷ 20.8 ಕೋಟಿ ರೂ ಆದಾಯ ಗಳಿಸಿದ್ದರೆ ಈ ವರ್ಷ ಕೇವಲ 12.6 ಕೋಟಿ ರೂಪಾಯಿ ಗಳಿಸಿದೆ. ರಾಜ್ಯದಲ್ಲಿ ಮುಜರಾಯಿ ಇಲಾಖೆಯಡಿ 34,559 ದೇವಾಲಯಗಳಿವೆ.

ಧಕ್ಕೆಯಾಗದ ಸಿಬ್ಬಂದಿ ವೇತನ: ಮುಜರಾಯಿ ಇಲಾಖೆಯಡಿ ಬರುವ ಎ ದರ್ಜೆಯ 175 ದೇವಾಲಯಗಳು(ವರ್ಷಕ್ಕೆ 25 ಲಕ್ಷಕ್ಕೆ ಹೆಚ್ಚು ಆದಾಯ ಹೊಂದಿರುವ ದೇವಸ್ಥಾನಗಳು), 163 ಬಿ ದರ್ಜೆಯ (ವರ್ಷಕ್ಕೆ 5ರಿಂದ 25 ಲಕ್ಷ ಆದಾಯ) ಮತ್ತು ಸಿ ದರ್ಜೆಯ(ವರ್ಷಕ್ಕೆ 5 ಲಕ್ಷಕ್ಕಿಂತ ಕಡಿಮೆ ಆದಾಯ) ಹೊಂದಿರುವ ದೇವಸ್ಥಾನಗಳು ಈ ವರ್ಷ ಕೋವಿಡ್ ಲಾಕ್ ಡೌನ್ ಆದ ಕಾರಣ ಹಾಕಿದ್ದ ಬಾಗಿಲು ಮತ್ತೆ ತೆರೆದದ್ದು ಸೆಪ್ಟೆಂಬರ್ ನಲ್ಲಿಯ

ಬೇಸಿಗೆ ಕಾಲದಲ್ಲಿ ದೇವಸ್ಥಾನಗಳಿಗೆ ಬರುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿರುತ್ತದೆ, ಆ ಸಮಯದಲ್ಲಿಯೇ ಅಧಿಕ ಆದಾಯವಿರುತ್ತದೆ.ಹಬ್ಬಹರಿದಿನಗಳು ಮತ್ತು ವಿಶೇಷ ಸಮಯಗಳಲ್ಲಿಯೂ ಇರುತ್ತದೆ. ಕೊರೋನಾ ಹಿನ್ನೆಲೆಯಲ್ಲಿ ಆನ್ ಲೈನ್ ದರ್ಶನ ವ್ಯವಸ್ಥೆ ಕಲ್ಪಿಸಿದ್ದರೂ ಕೂಡ ಅನೇಕ ಭಕ್ತರು ಖುದ್ದಾಗಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಆಸೆ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಈ ವರ್ಷ ಆದಾಯ ಕಡಿಮೆಯಾಗಿದೆ ಎಂದು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿ ಹೇಳುತ್ತಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ವರ್ಷ ದೇವಾಲಯಗಳ ಆದಾಯ ಕಡಿಮೆಯಾಗಿರುವುದು ಹೌದು. ಆದರೆ ಮುಜರಾಯಿ ಇಲಾಖೆಯ ದೇವಾಲಯಗಳ ಸಿಬ್ಬಂದಿಯ ವೇತನಕ್ಕೆ ಧಕ್ಕೆಯಾಗಿಲ್ಲ. ನಮ್ಮ ದೇವಸ್ಥಾನಗಳಲ್ಲಿ ಸಿಬ್ಬಂದಿಗೆ ವೇತನ ನೀಡಲು ಹಣ ಸಾಕಷ್ಟಿದ್ದು, ನಿಗದಿತ ಸಮಯಕ್ಕೆ ವೇತನ ನೀಡಲಾಗಿದೆ. ಬ್ಯಾಂಕುಗಳಿಟ್ಟ ಹಣದಿಂದ ಬಂದ ಬಡ್ಡಿಯಿಂದ ವೇತನ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com