ನಾಗರಹೊಳೆ: ಆನೆ ದಾಳಿಗೆ ಸಿಲುಕಿ ಅರಣ್ಯ ವೀಕ್ಷಕ ಸಾವು

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್‌ ವಾಚರ್‌) ಗುರುರಾಜ್‌ (52) ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್‌ ವಾಚರ್‌) ಗುರುರಾಜ್‌ (52) ಮೃತಪಟ್ಟಿದ್ದಾರೆ.

ನಾಗರಹೊಳೆ ಉದ್ಯಾನದಲ್ಲಿ ಆನೆ ಹಠಾತ್ ದಾಳಿ ನಡೆಸಿದ ಪರಿಣಾಮ ಒಬ್ಬರು ಬಲಿಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೀಟ್‌ಗೆ ತೆರಳುತ್ತಿದ್ದ ವೇಳೆ ಸಲಗ ಮೂವರ ಮೇಲೆ ದಾಳಿ ಮಾಡಿದೆ. ವಾಚರ್‌ ಅಶೋಕ  ಸಲಗದ ದಾಳಿಯಿಂದ ಗಾಯಗೊಂಡಿದ್ದು, ಕೊಡಗಿನ ಕುಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗುರುವಾರ ಮಧ್ಯಾಹ್ನ ನಾಗರಹೊಳೆ ಡಾರ್ಮೆಂಟ್ರಿ ಬಳಿಯಿಂದ ಮೂವರು ಬೀಟ್‌ ಆರಂಭಿಸಿದ್ದರು. ಒಂದು ಕಿ. ಮೀ. ದೂರದ ಬೈಸನ್ ಹಡ್ಲು ಎಂಬ ಪ್ರದೇಶದಲ್ಲಿ ಮೂವರ ಮೇಲೆ ಸಲಗ ದಿಢೀರ್ ದಾಳಿ ನಡೆಸಿದೆ. 

ಹೊಟ್ಟೆಯ ಭಾಗವನ್ನು ಆನೆ ತುಳಿದಿದ್ದರಿಂದ ಗುರುರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಅವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಣಸೂರಿನಲ್ಲಿ ವಾಸವಾಗಿದ್ದ ಗುರುರಾಜ್ 1991ರಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕ್ಷೇಮಾಭಿವೃದ್ಧಿ ನೌಕರರಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಗುರುರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಶೋಕ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com