ಪೊಲೀಸ್
ಪೊಲೀಸ್

ಬೆಂಗಳೂರು: ನಿವೃತ್ತ ಡಿವೈಎಸ್‍ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್‍ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು: ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್‍ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ವಿಜಯನಗರ ಎಂಸಿ ಲೇಔಟ್ ನಲ್ಲಿರುವ ನಿವಾಸದಲ್ಲಿ ನಿವೃತ್ತ ಡಿವೈಎಸ್‍ಪಿ ಹನುಮಂತಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಹನುಮಂತಪ್ಪನವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. 

ಹನುಮಂತಪ್ಪ ಮಾಗಡಿ ರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಸಂಬಂಧ ಪ್ರಕರಣ ವಿಜಯನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com