ಬೆಂಗಳೂರು: ಹಣಕಾಸಿನ ವಿವಾದದ ಕಾರಣದಿಂದಾಗಿ 24 ವರ್ಷದ ಯುವಕನೊಬ್ಬನನ್ನು ಆತನ ರೂಮೇಟ್ ಹತ್ಯೆ ಮಾಡಿರುವ ಘಟನೆ ವಿಜಯನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
24 ವರ್ಷದ ಇರ್ಪಾನ್ ಮೃತಪಟ್ಟ ಯುವಕನಾಗಿದ್ದಾನೆ. ಇರ್ಪಾನ್ ಮತ್ತು ಆತನ ರೂಮೇಟ್ ನವೀನ್ ನಡುವೆ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿ ನವೀನ್, ಇರ್ಪಾನ್ ನನ್ನು ಹತ್ಯೆ ಮಾಡಿರುವುದಾಗಿ ಪಶ್ಚಿಮ ವಲಯ ಡಿಸಿಪಿ ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.
ಆರೋಪಿ ನವೀನ್ ನನ್ನು ಕಳೆದ ಮಧ್ಯರಾತ್ರಿ ಬಂಧಿಸಲಾಗಿದೆ. ಮಾರಾಟ ಮಾಡಲಾದ ಮೊಬೈಲ್ ಫೋನಿನ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಿವಾದ ಉಂಟಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.
Advertisement