ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಹಠಾತ್ ನಿಧನ: ಮುಖ್ಯಮಂತ್ರಿ ಸೇರಿ ರಾಜಕೀಯ ನಾಯಕರ ಸಂತಾಪ

ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಎಸ್ ಎಲ್ ಧರ್ಮೇಗೌಡ ಮೃತಪಟ್ಟ ರೈಲ್ವೆ ಹಳಿ ಪಕ್ಕ
ಎಸ್ ಎಲ್ ಧರ್ಮೇಗೌಡ ಮೃತಪಟ್ಟ ರೈಲ್ವೆ ಹಳಿ ಪಕ್ಕ
Updated on

ಬೆಂಗಳೂರು: ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷಾತೀತವಾಗಿ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಎಸ್ ಎಲ್ ಧರ್ಮೇಗೌಡರ ನಿಧನ ಸುದ್ದಿಯನ್ನು ನಂಬಲೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಿನ್ನೆಯಷ್ಟೇ ಸಮಾರಂಭದಲ್ಲಿ ಒಟ್ಟಿಗೆ ಭಾಗವಹಿಸಿದ್ದೆವು, ಸಾಕಷ್ಟು ಮಾತನಾಡಿದ್ದೆವು, ನಂತರ ರಾತ್ರಿ ಅವರಿಲ್ಲ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಸಿ ಟಿ ರವಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com