ಸರ್ಕಾರಕ್ಕೆ ಮುಜುಗರ ತಂದಿದ್ದ ಡಿ.ರೂಪಾ, ನಿಂಬಾಳ್ಕರ್ ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಷದ ಕೊನೆಯ ದಿನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿಗಳಾದ ಡಿ ರೂಪ-ಹೇಮಂತ್ ನಿಂಬಾಳ್ಕರ್
ಐಪಿಎಸ್ ಅಧಿಕಾರಿಗಳಾದ ಡಿ ರೂಪ-ಹೇಮಂತ್ ನಿಂಬಾಳ್ಕರ್
Updated on

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 8 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಷದ ಕೊನೆಯ ದಿನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿಸಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು  ಕುಂದುಕೊರತೆ ಮತ್ತು ಮಾನವ ಹಕ್ಕುಗಳ ಎಡಿಜಿಪಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಗ್ರೇವಿಯೆನ್ಸ್ ಅಂಡ್ ಹ್ಯೂಮನ್ ರೈಟ್ಸ್ ಎಡಿಜಿಪಿಯಾಗಿದ್ದಂತ ಮಾಲಿನಿ ಕೃಷ್ಣಮೂರ್ತಿಯವರನ್ನು ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಿ.ರೂಪಾ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಡಿ.ರೂಪಾ ಅವರನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ರೂಪಾ ಜೊತೆ ಜೊತೆಗೆ ಐಜಿಪಿ ಹಾಗೂ ಎಸಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಐಎಸ್ ಡಿಯ ಐಜಿಪಿಯಾಗಿ ವರ್ಗಾವಣೆ ಮಾಡಿದೆ. ಎಸಿಬಿಯ ಐಜಿಪಿಯ ಚಂದ್ರಶೇಖರ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ವಿಭಾಗದ ಐಜಿಪಿ ವಿಪುಲ್ ಕುಮಾರ್ ಅವರನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಐಜಿಪಿ ಮತ್ತು ಡೈರೆಕ್ಟರ್ ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಡಿಐಜಿ ಹಾಗೂ ಕಮೀಷನರ್ ವಿಕಾಸ್ ಕುಮಾರ್ ವಿಕಾಸ್ ಅವರನ್ನು, ಕರ್ನಾಟಕ ಮೀಸಲು ಪೊಲೀಸ್ ನ ಡಿಐಜಿ  ಆಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ವರ್ಟಿಕ ಕಟಿಯಾರ್ ಅವರನ್ನು ಬೆಂಗಳೂರಿನ ಕ್ರೈಮ್ ರೆಕಾರ್ಡ್ ಬ್ಯೂರೋದ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ, ರಂಜಿತ್ ಕುಮಾರ್ ಬಂದರು ಅವರನ್ನು ಮಂಗಳೂರು ಸೌತ್ ನ ಎಸಿಪಿ ಸ್ಥಾನದಿಂದ ಭಟ್ಕಳ ಉಪ ವಿಭಾಗದ ಎಸಿಪಿಯಾಗಿ ನೇಮಕ ಮಾಡಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com