ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!

ಕೆರೆಯಲ್ಲಿ ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!
ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.!
Updated on

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗೊಲ್ಲರ ಕೊಪ್ಪಲು ಗ್ರಾಮದ ನಿವಾಸಿ ನಾರಾಯಣ್ ಮೃತಪಟ್ಟವ್ಯಕ್ತಿ. ಇಂದು ಮಧ್ಯಾಹ್ನ ನಾರಾಯಣ್ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದ ಮೂಲಕ ಕೆರೆ ಮಧ್ಯ ಭಾಗಕ್ಕೆ ಹೋಗಿಬಲೆ ಬೀಸುವಾಗ ಆಯಾತಪ್ಪಿ ಬಿದ್ದು ಸಾವಿನಪ್ಪಿರುವುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಶವವನ್ನು ಹೊರಕ್ಕೆ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ.ಈ ಸಂಬಂಧ ಕೆ.ಆರ್.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com