ಹೊಸಪೇಟೆ: ದೇವರ ಹುಂಡಿಯಲ್ಲಿ ಪ್ರೇಮ ನಿವೇದನ ಪತ್ರ!

ಇತ್ತೀಚೆಗೆ ನಡೆದಿದ್ದ ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಇಡಲಾಗಿದ್ದ ತಾತ್ಕಾಲಿಕ ಹುಂಡಿಯಲ್ಲಿ ಪ್ರೇಮ ಪತ್ರ ಪತ್ತೆಯಾಗಿದೆ.
ಹುಂಡಿಯಲ್ಲಿ ದೊರೆತ ಪ್ರೇಮನಿವೇದನಾ ಪತ್ರ
ಹುಂಡಿಯಲ್ಲಿ ದೊರೆತ ಪ್ರೇಮನಿವೇದನಾ ಪತ್ರ
Updated on

ಹೊಸಪೇಟೆ: ಇತ್ತೀಚೆಗೆ ನಡೆದಿದ್ದ ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಇಡಲಾಗಿದ್ದ ತಾತ್ಕಾಲಿಕ ಹುಂಡಿಯಲ್ಲಿ ಪ್ರೇಮ ಪತ್ರ ಪತ್ತೆಯಾಗಿದೆ.

ನಿನ್ನೆ ನಡೆದ ಹುಂಡಿ ಎಣಿಕ ಕಾರ್ಯದಲ್ಲಿ ಹಣದ ಜೊತೆ ಪ್ರೇಮಪತ್ರ ಪತ್ರೆಯಾಗಿದ್ದು, ನವೀನ್ ಎಂಬ ಯುವಕ ಕಾವೇರಿ ಎನ್ನುವ ಯುವತಿಯನ್ನ ಪ್ರೀತಿಸುತಿದ್ದು ಆಕೆಯೇ ತನ್ನ ಬಾಳ ಸಂಗಾತಿಯಾಗಿ ಬರಲಿ‌ ಎಂದು ದೇವರಲ್ಲಿ ಅರಿಕೆಮಾಡಿಕೊಂಡಿದ್ದಾನೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಅಳವಡಿಸಲಾಗಿದ್ದ ತಾತ್ಕಾಲಿಕ ಹುಂಡಿಯಲ್ಲಿ 36 ಲಕ್ಷಕ್ಕೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ.

ಸದ್ಯಕ್ಕೆ ಈ ಭಾಗದಲ್ಲಿ ಹಣಕ್ಕಿಂತ ಪ್ರೇಮಪತ್ರದ ವಿಚಾರವೇ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com