ಆಕಸ್ಮಿಕ ಬೆಂಕಿ‌ ತಗುಲಿ ತಂದೆ-ಮಗ ಸಾವು

ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಒಲೆ ಹಚ್ಚುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ತಂದೆ-ಮಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಈಶ್ವರ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್​ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೇ, ಪತ್ನಿ ಪುಷ್ಪಲತಾ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ತಂದೆ ರೇಣುಕಾಸ್ವಾಮಿ ಮತ್ತು ಮಗ ತೇಜಸ್​ ಮೃತದುರ್ದೈವಿಗಳು. ತಾಯಿ ಪುಷ್ಪಲತಾ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ.  ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ರೇಣುಕಾಸ್ವಾಮಿ ಸಶಸ್ತ್ರ ಮೀಸಲು ಪಡೆಯ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು  ಬಂದಿದೆ. ಕೆ.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com