ತುಮಕೂರು: ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್'ಸಿ ವಿದ್ಯಾರ್ಥಿನಿ

ಎಸ್ಎಸ್ಎಲ್'ಸಿ ಪರೀಕ್ಷೆ ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ನಡುವೆ ಪರೀಕ್ಷೆ ಎದುರಿಸಲು ಭೀತಿಗೊಳಗಾಗಿರುವ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ತುಮಕೂರು: ಎಸ್ಎಸ್ಎಲ್'ಸಿ ಪರೀಕ್ಷೆ ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ನಡುವೆ ಪರೀಕ್ಷೆ ಎದುರಿಸಲು ಭೀತಿಗೊಳಗಾಗಿರುವ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. 

ವರ್ಷಿತಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದೆ. ಅಯ್ಯಪ್ಪಸ್ವಾಮಿ ಎಕ್ಸ್ ಟೆನ್ಷನ್ ಬಳಿಯಿರುವ ನಿವಾದಲ್ಲಿ ಕಳೆದ ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ. 

ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು. ಸೋರಿಕೆಯಾಗಿದ್ದ ಈ ಪ್ರಶ್ನೆ ಪತ್ರಿಗೆಗಳನ್ನು ವರ್ಷಿತಾ ವಾಟ್ಸ್ ಅಪ್ ಮೂಲಕ ನನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ. ಈ ವಿಚಾರ ತಿಳಿದ ಪೋಷಕರು ವರ್ಷಿತಾಗೆ ಬೈದಿದ್ದಾರೆ. 

ವರ್ಷಿತಾ ವಿದ್ಯಾಭ್ಯಾಸದಲ್ಲಿ ಉತ್ತಮವಾಗಿರಲಿಲ್ಲ. ಚೇತನ್ ಇಂಗ್ಲೀಷ್ ಶಾಲೆಯಲ್ಲಿ ಓದುತ್ತಿದ್ದು, ಇತ್ತೀಚೆಗಷ್ಟೇ ಶಾಲಾ ಆಡಳಿತ ಮಂಡಳಿ ವರ್ಷಿತಾ ಪೋಷಕರಿಗೆ ದೂರು ನೀಡಿದ್ದರು. ಅಲ್ಲದೆ, ಸಲಹೆಗಳನ್ನೂ ನೀಡಿದ್ದರು. ಈ ವಿಚಾರಕ್ಕೆ ವರ್ಷಿತಾ ಪೋಷಕರು ಮಗಳಿಗೆ ಬೈದಿದ್ದು, ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com