ಯಡಿಯೂರಪ್ಪ
ಯಡಿಯೂರಪ್ಪ

ರಾಜ್ಯ ಬಜೆಟ್'ಗೆ ದಿನಗಣನೆ ಆರಂಭ: ಸಿಎಂಗೆ ಎದುರಾದ ಸಮಯದ ಅಭಾವ, ಸಾರ್ವಜನಿಕ ರಜೆಯಂದೂ ಅಧಿಕಾರಿಗಳೊಂದಿಗೆ ಸಭೆ

2020-21ನೇ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಆರಂಭಗೊಂಡಿದ್ದು, ಸಮಯದ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾರ್ವಜನಿಕ ರಜಾ ದಿನದಂದೂ ಕೂಡ ವಿತ್ತ ಸಚಿವಾಲಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. 
Published on

ಬೆಂಗಳೂರು: 2020-21ನೇ ಸಾಲಿನ ರಾಜ್ಯ ಬಜೆಟ್'ಗೆ ದಿನಗಣನೆ ಆರಂಭಗೊಂಡಿದ್ದು, ಸಮಯದ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾರ್ವಜನಿಕ ರಜಾ ದಿನದಂದೂ ಕೂಡ ವಿತ್ತ ಸಚಿವಾಲಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. 

ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ರಜಾ ದಿನವಾಗಿದ್ದರೂ ನಾಲ್ಕನೇ ಶನಿವಾರದಂದೂ ಕೂಡ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. 

ಫೆಬ್ರವರಿ 11 ರಿಂದಲೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದೀರ್ಘವಾಗಿ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳ ಅಧಿಕಾರಿಗಳೊಂದಿಗೆ ಸಭೆ ಹಾಗೂ ಮಾತುಕತೆಗಳನ್ನು ನಡೆಸುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com