ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸುನಿಲ್ (27) ಯುವಕ ಸಾವಿಗೀಡಾಗಿದ್ದಾರೆ. 
ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು
Updated on

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸುನಿಲ್ (27) ಯುವಕ ಸಾವಿಗೀಡಾಗಿದ್ದಾರೆ. 

ಚಿಲಕನಹಟ್ಟಿ ಟೋಲ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಾಗಿದ್ದ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಟೋಲ್ ಗೇಟ್ ಸಿಬ್ಬಂದಿಯೇ ಕಾರಣ ಎಂದು ತಿಮ್ಮಲಾಪುರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಇನ್ನು ಹಗರಿಬೊಮ್ಮನಗಳ್ಳಿ ತಾಲೂಕಿನ ಹೂಲವತ್ತಿ ಗ್ರಾಮದ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಬೈಕ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಲ್ಮಾನ್ (23) ಸಾವನ್ನಪ್ಪಿದ್ದಾನೆ. ಮಂತ್ರಾಲಯದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಕಾರು ಹಾಗೂ ಸಲ್ಮಾನ್ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com