ಕೊಪ್ಪಳ: ಈ ಬಾರಿಯ ಬಜೆಟ್ ವೇಳೆ ಸಂವಿಧಾನವನ್ನು ಅನುವಾದಿಸಿ ಕನ್ನಡಕ್ಕೆ ಮುದ್ರಿಸಿ ಎಲ್ಲ ಶಾಸಕರಿಗೂ ಓದಿ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ದತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ.
ಯಾಕೆಂದರೇ ಬಜೆಟ್ ಅಧಿವೇಶನದಲ್ಲಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಅದಕ್ಕಾಗಿ ಸಂವಿಧಾನವನ್ನು ಕನ್ನಡಕ್ಕೆ ಅನುವಾದಿಸಿ ಮುದ್ರಿಸಿ ಎಲ್ಲರಿಗೂ ಪುಸ್ತಕ ನೀಡುತ್ತೇವೆ ಎಂದರು.
ಬಜೆಟ್ ಮುನ್ನ ಅಂದರೆ ಮಾರ್ಚ್ 3 ಮತ್ತು 4ರಂದು ಎಲ್ಲ ಶಾಸಕರು ಸಂವಿಧಾನದ ಕುರಿತು ಭಾಷಣ ಮಾಡಲಿದ್ದಾರೆ ಎಂದರು. ಶಾಸಕರಿಗೆ ಸಂವಿಧಾನದ ಪುಸ್ತಕ ಓದಿಕೊಂಡು ಬಂದು ಮಾತನಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದರು.
Advertisement