ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟಿಲ್ಲ: ಸಚಿವ ಕೆಎಸ್ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟು ಇಲ್ಲ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈರಶ್ವರಪ್ಪ ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬಳ್ಳಾರಿ:  ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟು ಇಲ್ಲ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈರಶ್ವರಪ್ಪ ಹೇಳಿದ್ದಾರೆ. 

ಇಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಈ ಇಲಾಖೆಯ ಕಾರ್ಯಭಾರ ವಹಿಸಿಕೊಂಡಾಗ, ಉದ್ಯೋಗ ಖಾತ್ರಿ ಯೋಜನೆಯಡಿ 2800 ಕೋಟಿ ರೂ. ಬಾಕಿ ಇತ್ತು. ಈಗ 200 ಕೋಟಿಗೆ ಇಳಿದಿದೆ. ಉದ್ಯೋಗ ಖಾತ್ರಿ ಮಾಡಿದವರಿಗೆ ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸಿದರೆ ಹಣ ಬಿಡುಗಡೆಯಾಗುತ್ತದೆ. ರಾಜ್ಯದ ಪ್ರವಾಹ ಪೀಡಿತ 103 ತಾಲೂಕುಗಳ ರಸ್ತೆ ಅಭಿವೃದ್ಧಿಗೆ 1500 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಬಳಿಕ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿಯಿಂದ ಜಿಲ್ಲೆಯ 80 ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಛ ಭಾರತ್ ವಿಷನ್ ಯೋಜನೆಯಡಿ ಘನ ತ್ಯಾಜ್ಯ ಸಂಗ್ರಹಣೆ ವಾಹನಗಳನ್ನು ವಿತರಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಗರಗಳಂತೆ ಗ್ರಾಮೀಣ ಪ್ರದೇಶದಲ್ಲೂ ಸ್ವಚ್ಛತೆ ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಅನುಷ್ಠಾನಗೊಂಡಿರುವ ಸ್ವಚ್ಛ ಭಾರತ್ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಘನತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿಯಲ್ಲಿ ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ್ದು, ರಾಜ್ಯದಲ್ಲಿ 6021 ಗ್ರಾಮ ಪಂಚಾಯಿತಿಗಳ ಪೈಕಿ  ಈ ವರ್ಷ ರಾಜ್ಯದ 3000 ಗ್ರಾಮ ಪಂಚಾಯಿತಿಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ ಎಂದರು. 

ಭಾರತ ಸಂಸ್ಕತಿಯಲ್ಲಷ್ಟೇ ಮುಂದುವರೆದಿಲ್ಲ. ಸ್ವಚ್ಛತೆಯಲ್ಲೂ ಪ್ರಗತಿ ಸಾಧಿಸುತ್ತಿದೆ ಎನ್ನುವುದನ್ನು ತೋರಿಸಬೇಕಾಗಿದೆ. ಸ್ವಚ್ಛತೆ ಇದ್ದರೆ ಮಾತ್ರ ಆರೋಗ್ಯ. ಈ ನಿಟ್ಟಿನಲ್ಲಿ ಮೋದಿ ಅವರು ಸ್ವಚ್ಛ ಭಾರತದ ಕನಸು ಕಂಡಿದ್ದಾರೆ. ಭಾರತವು ಹಳ್ಳಿಗಳ ದೇಶವಾದರೂ ಅದು ಅಭಿವೃದ್ಧಿಯತ್ತ ಸಾಗಿದೆ. ಇಲ್ಲಿಯೂ ಜನರು ಉತ್ತಮ ಪರಿಸರದಲ್ಲಿ ಬದುಕಲು ಅನುವಾಗುವಂತೆ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಪ್ರತಿ ಗ್ರಾಮಪಂಚಾಯಿತಿಗೆ 20 ಲಕ್ಷ ರೂ,ಗಳನ್ನು ಕೇಂದ್ರ ಸರಕಾರ ಮಂಜೂರು ಮಾಡಿದ್ದು, ಇದರಡಿ ಘನತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದರು. 

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳನ್ನು ಸೌರ ವಿದ್ಯುತ್‍ ವ್ಯಾಪ್ತಿಗೆ ಒಳಪಡಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಅಲ್ಲದೆ, ಪ್ರಧಾನಿ ಅವರ ಆಶಯದಂತೆ ಮನೆ ಮನೆಗೂ ನಲ್ಲಿ ನೀರು ಸರಬರಾಜು ಮಾಡುವ ಪ್ರಯತ್ನವೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ನಡೆದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com