ಚಾಮರಾಜನಗರ: ವಿದ್ಯುತ್ ತಂತಿಬೇಲಿ ಸ್ಪರ್ಶ, ಎರಡು ಕಾಡನೆಗಳ ದುರ್ಮರಣ

ಕಬ್ಬಿನ ಗದ್ದಗೆ ಹಾಕಿದ್ದ ವಿದ್ಯುತ್‌ ತಂತಿ ತುಳಿದು ಜೋಡಿ ಆನೆಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಆನೆಗಳ ದಾರುಣ ಸಾವು
ಆನೆಗಳ ದಾರುಣ ಸಾವು

ಚಾಮರಾಜನಗರ: ವಿದ್ಯುತ್ ಬೇಲಿ ತುಳಿದು ಕಾಡಾನೆಗಳೆರಡು ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕರುಳವಾಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಆಹಾರ ಅರಸಿ ಬಂದ ಆನೆಗಳು ಜಮೀನಿಗ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಷಿಸುತ್ತಿದ್ದಂತೆಯೇ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಈ ಎರಡೂ ಗಂಡಾನೆಗಳು 30 ರಿಂದ 40ರ ವಯೋಮಾನದವು ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಎರಡೂ ಆನೆಗಳ ಮೃತ ದೇಹಗಳು ಕಂಡುಬಂದಿವೆ.
 
ಘಟನಾ ಸ್ಥಳಕ್ಕೆ ತಮಿಳುನಾಡಿನ ಸತ್ಯಮಂಗಲಂ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com