ಸಂವಿಧಾನ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಚಳವಳಿ ಅಗತ್ಯ; ರಮಾನಾಥ ರೈ

ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಡಿ.19ರಂದು ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್, ಘರ್ಷಣೆ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಇಂದು ಪುರಭವನದ ಅಂಬೇಡ್ಕರ್ ಪ್ರತಿಮೆಯ ಎದುರು ಏರ್ಪಡಿಸಿದ್ದ ಒಂದು ದಿನದ ಸಾಮೂಹಿಕ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ಡಿ. 19ರಂದು ನಡೆದ ಘಟನೆಗೆ ಸರಕಾರವೇ ನೇರ ಕಾರಣ. ಯಾವುದೇ ಪ್ರಚೋದನೆ ಇಲ್ಲದಿದ್ದರೂ ಏಕಾಏಕಿ ಪ್ರತಿಭಟನಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದರು. ಇದು ಸರಕಾರದ ಪೂರ್ವ ನಿಯೋಜಿತ ಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವರೇ ಇದಕ್ಕೆ ನೇರ ಹೊಣೆ ಎಂದು ರೈ ಆಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com