ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಜಾತ್ಯತಿತ ಜನತಾ ದಳದ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಮಾಡಿಕೊಂಡವರು.

ಪ್ರದೀಪ್ ಜಿ ಬೈಲೂರ್ ಹಲವು ವರ್ಷಗಳಿಂದ ಜಿಲ್ಲಾ ಜೆಡಿಯು ವಕ್ತಾರರಾಗಿ ಕೆಲಸ ಮಾಡುತ್ತಿದ್ದರು.

ಪ್ರದೀಪ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರು ಎಂದೂ ಹೇಳಲಾಗಿದ್ದು, ಇದರಿಂದಾಗಿ ಅವರು ಈ ದುಡಿಕಿನ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಅವರ ತಂದೆ ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದ ಸಂದರ್ಭ ಕೊರಂಗ್ರಪಾಡಿಯ ಗೇಟ್ ಜಂಕ್ಷನ್ ಬಳಿಯ ತನ್ನ ಬಾಡಿಗೆ ಮನೆಯಲ್ಲಿ ಇದ್ದ ಪ್ರದೀಪ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com