ಬೆಂಗಳೂರು: ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ, ಚಿಕಿತ್ಸೆ ಫಲಿಸದೆ ಎಎಸ್ಐ ಸಾವು

ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.
ಮಲ್ಲೇಶಯ್ಯ
ಮಲ್ಲೇಶಯ್ಯ
Updated on

ಬೆಂಗಳೂರು: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮಲ್ಲೇಶಯ್ಯ ಮೃತಪಟ್ಟವರು.

ಕಳೆದ ಶುಕ್ರವಾರ ರಾತ್ರಿ ಕರ್ತವ್ಯಕ್ಕಾಗಿ ಠಾಣೆಗೆ ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಲ್ಲೇಶಯ್ಯ ಅವರು ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com