ಹೊಸಪೇಟೆ: ಸಿಎಎ ಜಾಗೃತಿ ಅಭಿಯಾನದಲ್ಲಿ ಆನಂದ್ ಸಿಂಗ್ ಗೆ ಮುಖಭಂಗ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತ ಜಾಗೃತಿ ಅಭಿಯಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಲ್ಲಲ್ಲಿ ಮುಖಭಂಗ ಅನುಭವಿಸುವಂತಾಯಿತು.
ಶಾಸಕ ಆನಂದ್ ಸಿಂಗ್
ಶಾಸಕ ಆನಂದ್ ಸಿಂಗ್
Updated on

ಹೊಸಪೇಟೆ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತ ಜಾಗೃತಿ ಅಭಿಯಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಲ್ಲಲ್ಲಿ ಮುಖಭಂಗ ಅನುಭವಿಸುವಂತಾಯಿತು.

ಎಸ್ ಆರ್ ನಗರ ಹಾಗೂ ಛಲವಾದಿಕೇರಿಯಲ್ಲಿ ಆನಂದ್ ಸಿಂಗ್ ನೇತೃತ್ವದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಜನರಿಂದ ತೀವ್ರ  ವಿರೋಧ ವ್ಯಕ್ತವಾಯಿತು.

ಬಾರಿ ಪೊಲೀಸ್ ಭದ್ರತೆಯಲ್ಲಿ ಎಸ್.ಆರ್.ನಗರದಲ್ಲಿ ಜಾಗೃತಿ ಅಭಿಯಾನ ಪ್ರಾರಂಭಿಸಿದ  ಆನಂದ್ ಸಿಂಗ್ ಗೆ ಕಾಯ್ದೆ ಬಗ್ಗೆ ನಮಗೆಲ್ಲ ಗೊತ್ತಿದೆ ಮುಂದೆ ಹೋಗು ಎಂದು ಅಲ್ಲಿನ ನಿವಾಸಿಗಳು ನೇರವಾಗಿಯೇ ಹೇಳಿದರು. ಎಸ್.ಆರ್ ನಗರದ ಬಹುತೇಕ ಮನೆಗಳ ಬಾಗಿಲು ಬಂದ್ ಮಾಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.

ಎಸ್ ಆರ್ ನಗರದ ಜನಸಾಮಾನ್ಯರೆಲ್ಲರೂ ಒಟ್ಟಿಗೆ ಸೇರಿ ಜಾಗೃತಿ ಅಭಿಯಾನವನ್ನು ಧಿಕ್ಕರಿಸಿದರು.ಆನಂದ್ ಸಿಂಗ್ ಕೈಯಲ್ಲಿದ್ದ ಒಂದೇ ಒಂದು ಕರ ಪತ್ರ ಪಡೆಯದೆ ಸಾಮೂಹಿಕವಾಗಿ ಕಾಯ್ದೆ ಜಾರಿಗೆ ಆಕ್ರೋಶ ವ್ಯಕ್ತಪಡಿಸಿದರು.ಬೆರಳೆಣಿಕೆಯಷ್ಟು ಜನಗಳು ಮಾತ್ರ ಜಾಗೃತಿ ಅಭಿಯಾನದ ಕರ ಪತ್ರ ಪಡೆದು ಆನಂದ್ ಸಿಂಗ್ ಅವರನ್ನು ವಾಪಾಸ್ ಕಳುಹಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com