ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ಸನಾತನ ಸಂಸ್ಥೆ

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.
ಗೌರಿ ಲಂಕೇಶ್
ಗೌರಿ ಲಂಕೇಶ್
Updated on

ಪಣಜಿ: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.

ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ರಿಷಿಕೇಶ್ ದೇವದಿಕರ್ ಅವರನ್ನು ಬಂಧಿಸಿದ್ದಾರೆ ಎಂದು ನಮಗೆ ತಿಳಿದಿದೆ ಅವರನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಯಿತು. ನಾವು ಈ ವಿಷಯದ ಬಗ್ಗೆ ಹೆಚ್ಚಿನ ವಿಚಾರಣೆಗೆ ಮುಂದಾಗಿದ್ದೇವೆ” ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ್ ರಾಜನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮಾಹಿತಿಯ ಪ್ರಕಾರ, ದೇವದಿಕರ್ ಕೆಲವು ವರ್ಷಗಳ ಹಿಂದೆ ನಮ್ಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು; ಆದರೆ ಅವರು ಕಳೆದ ಎಂಟು-ಹತ್ತು ವರ್ಷಗಳಿಂದ ಸಕ್ರಿಯವಾಗಿಲ್ಲ. 

ಈ ಮಧ್ಯೆ ಬೇರೆ ಯಾವುದೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ತಿಳಿದಿತ್ತು. ಸನಾತನ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯಾರಾದರೂ ಈಗ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಸನಾತನ ಸಂಸ್ಥೆಯನ್ನು ದೂಷಿಸುವುದು ಸಂಪೂರ್ಣವಾಗಿ ಸೂಕ್ತವಲ್ಲ. 

ಸನಾತನ ಸಂಸ್ಥೆಯು ಆಧ್ಯಾತ್ಮಿಕತೆಯನ್ನು ಹರಡುವ ಕೆಲಸವನ್ನು ಮಾಡುತ್ತದೆ. ಸನಾತನ್ ಸಂಸ್ಥೆಯು ಈ ಪತ್ರಿಕಾ ಪ್ರಕಟಣೆಯ ಮೂಲಕ ಯಾವುದೇ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತದೆ, ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com