ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಚಲಿಸುತ್ತಿದ್ದ ಬಸ್ ನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಚಲಿಸುತ್ತಿದ್ದ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳು ಆತ್ಮಹತ್ಯೆಗೆ ಯತ್ನಿಸುವ ಘಟನೆ ಉಡುಪಿಯ ಕೊಲ್ಲೂರಿನಲ್ಲಿ ನಡೆದಿದೆ. 

ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳು ಆತ್ಮಹತ್ಯೆಗೆ ಯತ್ನಿಸುವ ಘಟನೆ ಉಡುಪಿಯ ಕೊಲ್ಲೂರಿನಲ್ಲಿ ನಡೆದಿದೆ. 

ಬಸ್ಸಿನಲ್ಲಿ ಒಂದೂವರೆ ವರ್ಷದ ಮಗುವಿನೊಂದಿಗೆ ದಂಪತಿಗಳು ಪ್ರಯಾಣಿಸುತ್ತಿದ್ದರು. ಪ್ರಯಾಣದ ವೇಳೆ ದಂಪತಿಗಳು ತಾವೂ ವಿಷ ಸೇವಿಸಿ, ಮಗುವಿಗೂ ವಿಷವುಳಿಸಿದ್ದಾರೆ. 

ದಂಪತಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ಕಂಡ ನಿರ್ವಾಹಕ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆಗೆದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಆತ್ಮಹತ್ಯೆಗೆ ಯತ್ನಿಸಿದ ದಂಪತಿಗಳು ತಮಿಳುನಾಡು ಮೂಲದವರೆಂದು ಹೇಳಲಾಗುತ್ತಿದ್ದು, ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ಮರಳಿ ತಮಿಳುನಾಡಿಗೆ ವಾಪಸ್ಸಾಗುತ್ತಿದ್ದರೂ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. 

Related Stories

No stories found.

Advertisement

X

Advertisement

X
Kannada Prabha
www.kannadaprabha.com