ಬೆಂಗಳೂರು: ಆತ್ಮರಕ್ಷಣೆಗೆ ಇಬ್ಬರು ರೌಡಿಗಳ ಕಾಲಿಗೆ ಗುಂಡು ಹೊಡೆದ ಸಿಸಿಬಿ ಪೊಲೀಸರು 

ಆತ್ಮರಕ್ಷಣೆಗಾಗಿ ಇಬ್ಬರು ರೌಡಿಗಳ ಮೊಣಕಾಲು ಕೆಳಗೆ ಕಾಲಿಗೆ ನಗರ ಅಪರಾಧ ವಿಭಾಗದ ಪೊಲೀಸರು ಸೋಮವಾರ ಬೆಳಗ್ಗೆ ಗುಂಡೇಟು ನೀಡಿದ ಘಟನೆ ನಡೆದಿದೆ.
ಬೆಂಗಳೂರು: ಆತ್ಮರಕ್ಷಣೆಗೆ ಇಬ್ಬರು ರೌಡಿಗಳ ಕಾಲಿಗೆ ಗುಂಡು ಹೊಡೆದ ಸಿಸಿಬಿ ಪೊಲೀಸರು 
Updated on

ಬೆಂಗಳೂರು: ತಮ್ಮ ಆತ್ಮ ರಕ್ಷಣೆಗಾಗಿ ಇಬ್ಬರು ರೌಡಿಶೀಟರ್​​ಗಳ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬಿಟಿಎಂ ಲೇಔಟ್​​​ನ ರಂಕಾ ಕಾಲೋನಿ ಬಳಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ.


ಮಹೇಶ್​ ಅಲಿಯಾಸ್ ಹಂದಿ ಮಹೇಶ್ ಮತ್ತು ಸತೀಶ್ ಎಂಬ ರೌಡಿ ಶೀಟರ್ ಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.


ಆರೋಪಿ ಮಹೇಶ್ ವಿರುದ್ಧ 2 ಕೊಲೆ ಪ್ರಕರಣ ಸೇರಿ ಒಟ್ಟ 5 ಪ್ರಕರಣಗಳು ಹಾಗೂ ಸತೀಶ್ ವಿರುದ್ಧ 3 ಕೊಲೆ ಸೇರಿ 5 ಪ್ರಕರಣಗಳು ದಾಖಲಾಗಿದ್ದವು.

ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸ್ ರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರೂ, ಅವರು ಪೊಲೀಸ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು. 

ಗಾಯಗೊಂಡ ರೌಡಿಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com