ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರಿನಲ್ಲಿ ಮತ್ತೆ ಪೌರತ್ವದ ಕಿಚ್ಚು: ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ ಹಿನ್ನೆಲೆ ಹೆಚ್ಚಿದ ಭದ್ರತೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ. 
Published on

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ. 

ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಗಳಿದ್ದು, ಕರಾವಳಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಈಗಾಗಪೇ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಭದ್ರೆತೆಗೆ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆಗೊಳಿಸಲಾಗಿದೆ. 

ಇನ್ನು ಪ್ರತಿಭಟನೆ ಹಿನ್ನೆಲೆ ಬೆಳಿಕ್ಕೆ 8ರಿಂದ ರಾತ್ರಿ 10ವರೆಗೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರವನ್ನೂ ಬದಲು ಮಾಡಲಾಗಿದೆ. 

ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದು, ಈ ವೇಳೆ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com