ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ
ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ

'ಆರೋಪಿ ಆದಿತ್ಯ ರಾವ್ ನಮ್ಮ ಕಸ್ಟಡಿಯಲ್ಲಿದ್ದಾನೆ': ಮಂಗಳೂರು ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ 

ಕಳೆದ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟಕ ಸಾಧನವನ್ನು ಇರಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಬಂಧಿಸಿ ಸದ್ಯ ನಮ್ಮ ಕಸ್ಟಡಿಯಲ್ಲಿರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ ತಿಳಿಸಿದ್ದಾರೆ.

ಮಂಗಳೂರು: ಕಳೆದ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟಕ ಸಾಧನವನ್ನು ಇರಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಬಂಧಿಸಿ ಸದ್ಯ ನಮ್ಮ ಕಸ್ಟಡಿಯಲ್ಲಿರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಅವರು ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಮ್ಮ ತನಿಖಾ ತಂಡ ಆದಿತ್ಯ ರಾವ್ ನನ್ನು ಎಲ್ಲಾ ಆಯಾಮಗಳಿಂದಲೂ ತೀವ್ರ ವಿಚಾರಣೆಗೊಳಪಡಿಸಲಿದೆ. ಆತನನ್ನು ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದರು.


ಆದಿತ್ಯ ರಾವ್ ನನ್ನು ನಿನ್ನೆ ಮಂಗಳೂರಿನ ಮೊದಲನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಟ್ರಾನ್ಸಿಟ್ ವಾರಂಟ್ ಹೊರಡಿಸಿದೆ ಎಂದು ತಿಳಿಸಿದ್ದಾರೆ. 


ಮಂಗಳೂರು ವಿಮಾನ ನಿಲ್ದಾಣ ಹತ್ತಿರ ಸ್ಫೋಟಕ ಸಾಮಗ್ರಿ ಇರಿಸಿ ಇಡೀ ರಾಜ್ಯಾದ್ಯಂತ ಸುದ್ದಿಯಾಗಿದ್ದ ಆದಿತ್ಯ ರಾವ್ ನಿನ್ನೆ ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಶರಣಾಗಿದ್ದ. 

Related Stories

No stories found.

Advertisement

X
Kannada Prabha
www.kannadaprabha.com