ಬ್ಯಾಂಕ್ ನಲ್ಲಿ ಸೀಕ್ರೆಟ್ ಲಾಕರ್ ಹೊಂದಿದ್ದ ಬಾಂಬರ್ ಆದಿತ್ಯ ರಾವ್

ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್, ಪೊಲೀಸ್ ತನಿಖೆ ವೇಳೆ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಬಿಚ್ಚಿಡುವ ಮೂಲಕ ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸುತ್ತಿದ್ದಾನೆ.
ಆದಿತ್ಯ ರಾವ್
ಆದಿತ್ಯ ರಾವ್

ಬೆಂಗಳೂರು: ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್, ಪೊಲೀಸ್ ತನಿಖೆ ವೇಳೆ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಬಿಚ್ಚಿಡುವ ಮೂಲಕ ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸುತ್ತಿದ್ದಾನೆ.

ಪ್ರಕರಣದ ಕುರಿತು ತೀವ್ರ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆದಿತ್ಯ ರಾವ್, ತಾನು ಬ್ಯಾಂಕ್ ನಲ್ಲಿ ಲಾಕರ್ ಹೊಂದಿದ್ದು, ಬಾಂಬ್ ಇಡುವ ಮುನ್ನ ಆ ಲಾಕರ್ ನಲ್ಲಿ ಬೇರೆ ಬೇರೆ ವಸ್ತುಗಳನ್ನು ಇಟ್ಟಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಹೀಗಾಗಿ ಇಂದು ತನಿಖಾಧಿಕಾರಿಗಳು ಆತನನ್ನು ಕರ್ನಾಟಕ ಬ್ಯಾಂಕ್ ಗೆ ಕರೆದುಕೊಂಡು ಹೋಗಿ ಲಾಕರ್ ಪರಿಶೀಲನೆ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com