ಧಾರವಾಡ: ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 1 ಲಕ್ಷ ರೂ.ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬೇಂದ್ರೆಯವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ 31 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಬೆಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಭೈರಪ್ಪ ಅವರ ಜೀವನ ಮತ್ತು ಕೃತಿಗಳ ಕುರಿತ ವಿಚಾರ ಸಂಕಿರಣ ಅದೇ ದಿನ ನಡೆಯಲಿದೆ. ಭೈರಪ್ಪ ಅವರ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು.
Advertisement