ಎಸ್.ಎಲ್.ಭೈರಪ್ಪ
ಎಸ್.ಎಲ್.ಭೈರಪ್ಪ

ಖ್ಯಾತ ಕಾದಂಬರಿಕಾರ ಎಸ್‍ ಎಲ್‍ ಭೈರಪ್ಪಗೆ 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿ

ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 
Published on

ಧಾರವಾಡ:  ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 1 ಲಕ್ಷ ರೂ.ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬೇಂದ್ರೆಯವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ 31 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಬೆಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಭೈರಪ್ಪ ಅವರ ಜೀವನ ಮತ್ತು ಕೃತಿಗಳ ಕುರಿತ ವಿಚಾರ ಸಂಕಿರಣ ಅದೇ ದಿನ ನಡೆಯಲಿದೆ. ಭೈರಪ್ಪ ಅವರ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com