ಬೆಂಗಳೂರು: ಭತ್ತ, ಶೇಂಗಾ, ತೊಗರಿ, ಬಿಳಿ ಜೋಳ, ರಾಗಿಗೆ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಈ ಸಂಬಂಧ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಕೂಡಲೇ ಅಗತ್ಯ ಇರುವೆಡೆ ಖರೀದಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ.
ಭತ್ತಕ್ಕೆ ಪ್ರತಿ ಕ್ವಿಂಟಾಲ್ಗೆ 200 ರೂ.ಹಾಗೂ ತೊಗರಿಗೆ ಕ್ವಿಂಟಾಲ್ಗೆ 300 ರೂ. ಪ್ರೋತ್ಸಾಹಧನ ನೀಡಲು ಸಂಪುಟ ಉಪ ಸಮಿತಿ ನಿರ್ಧರಿಸಿದೆ.
Advertisement