ಹಾವೇರಿ: ಸಂಬಂಧ ಮುಂದುವರೆಸಲು ನಕಾರ, ಮಹಿಳೆ ಮೇಲೆ ಆ್ಯಸಿಡ್ ಎರೆಚಿದ್ದ ಭಗ್ನ ಪ್ರೇಮಿಯ ಬಂಧನ!

ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್‌ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾವೇರಿ: ಯುವತಿಯ ಮೇಲೆ ಆ್ಯಸಿಡ್ ಮಾಡಿ ಪರಾರಿಯಾಗಿದ್ದ ಆರೋಪಿ ಪ್ರಸಾದ್‌ನನ್ನು ಬಂಧಿಸುವಲ್ಲಿ ಹಾವೇರಿ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಬಂಧಿತ ಪ್ರಸಾದ್ ಹಾನಗಲ್ ತಾಲೂಕಿನ ಚಿಕ್ಕಬಾಸೂರ ಗ್ರಾಮದ ನಿವಾಸಿ. ಇಬ್ಬರು ಸಂಬಂಧದಲ್ಲಿದ್ದು ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ಕಳೆದ ಮಂಗಳವಾರ ಹಾವೇರಿಯ ಶಿವಲಿಂಗೇಶ್ವರ ನಗರದ ನಿವಾಸಿಯಾದ ಯುವತಿ ಮೇಲೆ ಹಾವೇರಿ ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್‌ನಲ್ಲಿ ಬಂದ ಪ್ರಸಾದ್ ಆ್ಯಸಿಡ್ ಎರಚಿ ಪರಾರಿಯಾಗಿದ್ದ.

ಗಾಯಾಳು ಯುವತಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com