ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ- ಸಿದ್ದರಾಮಯ್ಯ ಕಿಡಿ

ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್  ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು  ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್  ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವುದು  ಅಮಾನವೀಯ ವರ್ತನೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

 'ಹಿಂದುಗಳೆಲ್ಲ ಒಂದು' ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರ್ಕಾರ ರಾಜ್ಯದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ  ಹೈಕೋರ್ಟ್ ಬೀಸಿರುವ ಈ ಚಾಟಿ ಏಟಿನಿಂದಾದರೂ ಬುದ್ದಿ ಕಲಿಯಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮವೊಂದರಲ್ಲಿ ಬಂದ "ಬಿಎಸ್‌ವೈ ಟಿಪ್ಪಣಿಗೆ ಹೈಕೋರ್ಟ್ ಬೇಸರ" ಎಂಬ ಸುದ್ದಿಯನ್ನು ಅಪ್‌ಲೋಡ್‌ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com