ಸಚಿವ ಸಂಪುಟ: ಹೈಕಮಾಂಡ್ ಜೊತೆ ಯಡಿಯೂರಪ್ಪ ಮಾತನಾಡಿದ್ದು ಕೆಲವೇ ನಿಮಿಷಗಳಷ್ಟೇ: ನಾಳೆ ಭೇಟಿ ಮಾಡಲು ಸೂಚನೆ 

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. 
ಸಚಿವ ಸಂಪುಟ: ಹೈಕಮಾಂಡ್ ಜೊತೆ ಯಡಿಯೂರಪ್ಪ ಮಾತನಾಡಿದ್ದು ಕೆಲವೇ ನಿಮಿಷಗಳಷ್ಟೇ: ನಾಳೆ ಭೇಟಿ ಮಾಡಲು ಸೂಚನೆ
ಸಚಿವ ಸಂಪುಟ: ಹೈಕಮಾಂಡ್ ಜೊತೆ ಯಡಿಯೂರಪ್ಪ ಮಾತನಾಡಿದ್ದು ಕೆಲವೇ ನಿಮಿಷಗಳಷ್ಟೇ: ನಾಳೆ ಭೇಟಿ ಮಾಡಲು ಸೂಚನೆ
Updated on

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. 

ಮೊದಲು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ನೂತನ ರಾಷ್ಟ್ರಾಧ್ಯಕ್ಷರಾಗಿದ್ದಕ್ಕೆ ಶುಭಕೋರಿದರು, ದೆಹಲಿಯ ಚುನಾವಣಾ ಪ್ರಚಾರದಲ್ಲಿ ಕಾರ್ಯನಿರತರಾಗಿರುವ ಜೆಪಿ ನಡ್ಡಾ, ಯಡಿಯೂರಪ್ಪ ಜೊತೆ ಕೆಲವೇ ನಿಮಿಷಗಳು ಮಾತನಾಡಿ ಅಮಿತ್ ಶಾ ಅವರೊಂದಿಗೆ ಚರ್ಚಿಸಿ. ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ ಎಂದು ಹೇಳಿದರೆಂಬ ಮಾಹಿತಿ ಲಭ್ಯವಾಗಿದೆ. 

ಇದೇ ವೇಳೆ ಸಿಎಂ ಯಡಿಯೂರಪ್ಪ ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದು, ಸಂಭಾವ್ಯ ಸಚಿವರ ಪಟ್ಟಿ ನೀಡಿದ್ದಾರೆ. ಈ ಬಗ್ಗೆ ನಾಳೆ ಮಾತನಾಡಲು ಬಿಜೆಪಿ ಹೈಕಮಾಂಡ್ ಸೂಚಿಸಿದೆ, ನಾಳೆ ಮತ್ತೆ ಬಂದು ಭೇಟಿಯಾಗಿ ಸಂಪುಟ ವಿಚಾರವನ್ನು ಅಂತಿಮಗೊಳಿಸಿಕೊಂಡು ವಾಪಸ್ ತೆರಳುವುದಾಗಿ ಸ್ವತಃ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com