'ದೇಹವೆಂಬ ಗುಡಿಗೆ ವೈದ್ಯರೇ ದೇವರು': ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ. ಸುಧಾಕರ್ ಹಾರೈಕೆ

ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ.ಕೆ ಸುಧಾಕರ್ ಸಮಸ್ತ ವೈದ್ಯರಿಗೆ ಶುಭ ಕೋರಿದ್ದಾರೆ.
ಡಾ.ಸುಧಾಕರ್
ಡಾ.ಸುಧಾಕರ್
Updated on

ಬೆಂಗಳುರು: ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ.ಕೆ ಸುಧಾಕರ್ ಸಮಸ್ತ ವೈದ್ಯರಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದೇಹವೆಂಬ ಗುಡಿಗೆ ವೈದ್ಯರೇ ದೇವರು" ಎನ್ನಲಾಗುತ್ತದೆ. ಪ್ರಸ್ತುತ ಈ ಸಾಂಕ್ರಾಮಿಕದ ಸಮಯದಲ್ಲಿ ನಮ್ಮ ವೈದ್ಯರುಗಳ ಅಪಾರ ಪರಿಶ್ರಮ, ಸೇವೆ, ನಿಷ್ಟೆಗಳನ್ನು ನಾವು ಕಾಣುತ್ತಿದ್ದೇವೆ. ರೋಗಿಗಳಿಗೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟವರು ಇವರು! ಈ ವೈದ್ಯರ ದಿನದಂದು ಎಲ್ಲ ವೈದ್ಯರಿಗೆ ಒಂದು ಹೃತ್ಪೂರ್ವಕ ಧನ್ಯವಾದ ಹೇಳೋಣ ಎಂದು ಟ್ವೀಟ್ ಮಾಡಿದ್ದಾರೆ.

ಕೆ ಸುಧಾಕರ್ ಅವರು, ಇತ್ತೀಚೆಗಷ್ಟೇ ಹೋಮ್ ಕ್ವಾರಂಟೈನ್ ಮುಕ್ತಾಯಗೊಳಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ. ಸುಧಾಕರ್ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ಕಂಡುಬಂದಿತ್ತು. ಹೀಗಾಗಿ ಸುಧಾಕರ್ ಅವರು ಸ್ವಯಂ ನಿರ್ಬಂಧಕ್ಕೊಳಗಾಗಿದ್ದರು. ಸತತ ಐದು ದಿನಗಳ ಬಳಿಕ ಮತ್ತೆ ಕೋವಿಡ್-19 ಟೆಸ್ಟ್ ಒಳಗಾಗಿದ್ದ ಅವರ 2 ವರದಿಗಳು ನೆಗೆಟಿವ್ ಬಂದಿತ್ತು. ಹೀಗಾಗಿ ಸುಧಾಕರ್ ಅವರು ಮತ್ತೆ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com