ಶಿವಮೊಗ್ಗ: ಕರ್ನಾಟಕದ 47 ಇಲಾಖೆಗಳ 451ಸೇವೆಗಳನ್ನು ಸೇವಾ ಸಿಂಧು ಯೋಜನೆಯಡಿ ಸಾರ್ವಜನಿಕರು ಆನ್ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇವಾ ಸಿಂಧು ಯೋಜನೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಿಗೆ ನೇರ ಭೇಟಿಗೆ ಅವಕಾಶ ಇಲ್ಲದಿರುವುದರಿಂದ ಹಾಗೂ ಜನರು ಪರಡಾಡುವುದನ್ನು ತಪ್ಪಿಸಲು ಸೇವಾಸಿಂಧು ಆನ್ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Advertisement