ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ ಅಂಬರೀಷ್ ಮನವಿ

ಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
Updated on

ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ಸುಮಲತಾ ಅಂಬರೀಷ್ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕೇಳಿಬರುತ್ತಿರುವ ಸುದ್ದಿಗಳಿಗೆ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿರುವ ಅವರು, ಕೊರೋನಾದಿಂದ ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಹೊಂದಿ ಮತ್ತೆ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎನ್ನುವ ಭರವಸೆಯಿದೆ. ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ವರದಿ ತಿಳಿದ ಬಳಿಕವಷ್ಟೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರೂಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ ಎಂದಿದ್ದಾರೆ.

ಆದರೆ ಕೊರೋನಾ ಸೋಂಕಿತರನ್ನು ಅವಮಾನದಿಂದ ಕಾಣುವ, ನಿಂದಿಸುವ ವರ್ತನೆ ಕಾಣುತ್ತಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಸೇರಿ ಕೊರೋನಾ ವಿರುದ್ಧ ಹೋರಾಡೋಣ, ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com