ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ : ಆಡಳಿತ ಮಂಡಳಿ ನಿರ್ಲಕ್ಷ್ಯ ವಿರುದ್ಧ ಭಕ್ತರ ಆಕ್ರೋಶ

ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ ಆಗಿದೆ. ಮಹಾಲಕ್ಷ್ಮಿ ದೇವಾಲಯ ಹಿಂಭಾಗದ ಮಾರಮ್ಮನ ದೇವಾಲಯದ ಅರ್ಚಕನ ಮಡದಿಗೆ ಕೊರೋನಾ ದೃಡಪಟ್ಟ ಹಿನ್ನಲೆ ದೇವಾಲಯವನ್ನು ಜುಲೈ 20ರಿಂದಲೇ ಸೀಲ್ ಡೌನ್ ಮಾಡಲಾಗಿದೆ.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ
ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ
Updated on

ತುಮಕೂರು: ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ ಆಗಿದೆ. ಮಹಾಲಕ್ಷ್ಮಿ ದೇವಾಲಯ ಹಿಂಭಾಗದ ಮಾರಮ್ಮನ ದೇವಾಲಯದ ಅರ್ಚಕನ ಮಡದಿಗೆ ಕೊರೋನಾ ದೃಡಪಟ್ಟ ಹಿನ್ನಲೆ ದೇವಾಲಯವನ್ನು ಜುಲೈ 20ರಿಂದಲೇ ಸೀಲ್ ಡೌನ್ ಮಾಡಲಾಗಿದೆ.ಆದರೆ, ಈ ಬಗ್ಗೆ ಸಾರ್ವಜನಿಕರಿಗೆ ಆಡಳಿತ ಮಂಡಳಿ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದೆ.

ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿತ್ಯ ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿ  ದೇವಿಯ ದರ್ಶನ ಸಿಗದೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಕೊರೋನಾ ರೋಗದಿಂದ ಅರ್ಚಕನ ಮಡದಿ ಗುಣಮುಖವಾಗಿ ಮನೆಗೆ ಬಂದರೂ ಪ್ರಥಮ ಸಂಪರ್ಕದ ಕುಟುಂಬಸ್ಥರ ಪರೀಕ್ಷಾ
 ವರದಿ ಬರದೇ ಸಮಸ್ಯೆ ಸೃಷ್ಟಿಯಾಗಿದೆ.  ಸಿಲ್ ಡೌನ್ ಮಾಹಿತಿ ಇಲ್ಲದೇ ಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರ ಆಗಮಿಸುತ್ತಿದ್ದು,
 ಭಕ್ತರ ಸಮಸ್ಯೆ ಕೇಳುವವರು ಯಾರು ಎಂಬುದೇ ಯಕ್ಷಪ್ರಶ್ನೆಯಾಗಿದೆ. 

ಸೀಲ್ ಡೌನ್  ಮಾಡಿ 7ದಿನ ಕಳೆದರೂ ಸಾರ್ವಜನಿಕರಿಗೆ ಮಾಹಿತಿ ನೀಡದೇ ಆಡಳಿತ ಮಂಡಳಿಯಿಂದ ಸಮಸ್ಯೆ ಸೃಷ್ಟಿಯಾಗಲು ಕಾರಣವಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಾಲಕ್ಷ್ಮೀ ದರ್ಶನ ಇರುತ್ತಾ ಅಥವಾ ಇರಲ್ವಾ ಎಂಬುದೇ ಇನ್ನೂ ಪ್ರಶ್ನೆಯಾಗಿದೆ.  ಆಡಳಿತ ಮಂಡಳಿ ತಕ್ಷಣ ಕ್ರಮ ಕೈಗೊಂಡು ಭಕ್ತರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com