ಕೋಲಾರ: ಕ್ಷೌರ ಮಾಡಿಸಿಕೊಂಡಾತನಿಗೆ ಕೊರೋನಾ, ಬಂಗಾರಪೇಟೆಯಲ್ಲಿ ಆತಂಕ

ಕೋಲಾರದ ಬಂಗಾರಪೇಟೆಯಲ್ಲಿ ಹೇರ್ ಕಟಿಂಗ್ ಶಾಪ್ ನಲ್ಲಿ ಕ್ಷೌರ ಮಾಡಿಸಿದ್ದವರಿಗೆ ಈಗ ಕೊರೊನಾ ಸೋಂಕಿನ ಭೀತಿ ಎದುರಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಹೇರ್ ಕಟಿಂಗ್ ಶಾಪ್ ನಲ್ಲಿ ಕ್ಷೌರ ಮಾಡಿಸಿದ್ದವರಿಗೆ ಈಗ ಕೊರೊನಾ ಸೋಂಕಿನ ಭೀತಿ ಎದುರಾಗಿದೆ.

ಸೋಂಕಿತ ವ್ಯಕ್ತಿಯೊಬ್ಬರು ವಿವೇಕಾನಂದ ನಗರದ ಹೇರ್ ಸಲೂನ್ ನಲ್ಲಿ ಕ್ಷೌರ ಮಾಡಿಸಿದ್ದೇ ಇದೀಗ ಕೊರೊನಾ ಭೀತಿಗೆ ಕಾರಣವಾಗಿದೆ.

ಮಲೇಶಿಯಾದಿಂದ ಮೇ 29ರಂದು ಬಂಗಾರಪೇಟೆಗೆ ಹಿಂದಿರುಗಿದ ಯುವಕ ಭಾನುವಾರ ಬೆಳಗ್ಗೆ ಹೇರ್ ಕಟಿಂಗ್ ಮಾಡಿಸಿದ್ದನು. ಮೇ 31 ರಂದೇ ಆತನಿಗೆ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ವಿವೇಕಾನಂದ ನಗರ ಬಡಾವಣೆಯ ಸೂಪರ್ ಜಂಟ್ಸ್ ಪಾರ್ಲರ್ ನಲ್ಲಿ ಕ್ಷೌರ ಮಾಡಿಸಿದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಪುರಸಭೆ ಅಧಿಕಾರಿಗಳು ಮೈಕ್ ಹಿಡಿದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com