ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆತನಿಗೆ ಸಹಾಯ ಮಾಡಿದ್ದ ಮತ್ತೋರ್ವನನ್ನು ಬಂಧಿಸಿದ್ದಾರೆ.
ಗುಲಾಮ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ, ಸುಲಿಗೆಗೆ ನೆರವು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಗುಲಾಮ್ ನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಸದ್ಯ ಆರೋಪಿಯನ್ನು 10 ದಿನಗಳವರೆಗೆ ನ್ಯಾಯಾಲಯ ಪೊಲೀಸ್ ವಶಕ್ಕೆ ನೀಡಿದ್ದು, ತನಿಖಾ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಹದಿನೈದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಮಂಗಳೂರಿನ ರವಿ ಪೂಜಾರಿಯನ್ನು ಇಂಟರ್ಪೋಲ್ ಪೊಲೀಸರು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಬಂಧಿಸಿ, ಇತ್ತೀಚೆಗೆ ಬೆಂಗಳೂರಿಗೆ ಕರೆತಂದಿದ್ದರು.
ಸದ್ಯ ರವಿ ಪೂಜಾರಿಯನ್ನು ನಗರ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ.
Advertisement