ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 
ಮೃತಪಟ್ಟಿರುವ ಹಸಿವಿನ ಚಿತ್ರ
ಮೃತಪಟ್ಟಿರುವ ಹಸಿವಿನ ಚಿತ್ರ
Updated on

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಹಲಸಿನ ಹಣ್ಣಿಗೆ ವಿಷ ಬೆರಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ ಕಿಡಿಗೇಡಿಗಳು ಹಲಸಿನ ಹಣ್ಣಿಗೆ ವಿಷ ಬೆರಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದ ಸಾವನ್ನಪ್ಪಿದ ಮೂರು ಹಸುಗಳು ಕಿಟ್ಟೆಗೌಡ ಹಾಗೂ ಮಧು ಎಂಬುವವರಿಗೆ ಸೇರಿವೆ.

ಘಟನೆಗೆ ಸಂಬಂಧಿಸಿದಂತೆ‌ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com