ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಾಮರಾಜನಗರಕ್ಕೆ ಬಂದಿದ್ದ ಮುಂಬೈ ನಿವಾಸಿಗೆ ಕೊರೋನಾ: ಜಿಲ್ಲೆಗೆ ಗ್ರೀನ್'ಝೋನ್ ಪಟ್ಟಿ ಅಬಾಧಿತ

ರಾಜ್ಯದ ಏಕೈಕ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಾಮರಾಜನಗರಕ್ಕೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿರುವ ವ್ಯಕ್ತಿಯೋರ್ವನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
Published on

ಚಾಮರಾಜನಗರ/ಬೆಂಗಳೂರು: ರಾಜ್ಯದ ಏಕೈಕ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಾಮರಾಜನಗರಕ್ಕೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿರುವ ವ್ಯಕ್ತಿಯೋರ್ವನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ಸಂಬಂಧಿಕರ ಮನೆಗೆ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಸೋಂಕು ದೃಢಪಟ್ಟಿದೆ. ಅವರೊಂದಿಗೆ ಆಗಮಿಸಿದ ತಾಯಿ ಮತ್ತು ಸಹೋದರನ ಪರೀಕ್ಷಾ ವರದಿ ನೆಗೆಟೀವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾಹಿತಿ ನೀಡಿದ್ದಾರೆ.

ಈ ಮೂವರು ಶುಕ್ರವಾರ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ಕಾರಿನ ಮೂಲಕ ಹನೂರು ತಾಲ್ಲೂಕಿನ ಮಾರ್ಟಳ್ಳಿ ಪಾಲಿಮೇಡುವಿನಲ್ಲಿರುವ ಮನೆಗೆ ಬಂದಿದ್ದರು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯೊಳಗಿನ ಯಾರಿಗೂ ಸೋಂಕು ತಗುಲಿಲ್ಲವಾದ್ದರಿಂದ ಜಿಲ್ಲೆಯನ್ನು ಹಸಿರು ವಲಯವೆಂದೇ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com