ನೇಕಾರ ಸಮ್ಮಾನ್ ಯೋಜನೆ ಜಾರಿ: ನೇಕಾರರಿಂದ ಅರ್ಜಿ ಆಹ್ವಾನ

ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಧಾನಸೌಧ
ವಿಧಾನಸೌಧ
Updated on

ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ಘೋಷಣೆಯಾಗಿರುವುದರಿಂದ ಕೈಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ಜಾರಿಗೊಳಿಸಲಾಗಿರುವ ನೇಕಾರ ಸಮ್ಮಾನ್ ಯೋಜನೆ ನೆರವನ್ನು ಪಡೆದುಕೊಳ್ಳಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ 2020-21 ನೇ ಸಾಲಿನಿಂದ ಕೈಮಗ್ಗ ನೇಕಾರಿಕೆ ಹಾಗೂ ಇತರೆ ಕೈಮಗ್ಗ ಚಟುಚಟಿಕೆ ನಡೆಸುವ ನೇಕಾರರಿಗೆ ತಲಾ 2 ಸಾವಿರ ರೂ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ೨೦೧೭-೧೮ನೇ ಸಾಲಿನಲ್ಲಿ ೪ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ನೋಂದಾಯಿಸಲಾದ ಕೈಮಗ್ಗ ನೇಕಾರರಿಗೆ ಪೆಹಚಾನ್ ಕಾರ್ಡ್ ನಂಬರ್ ನೀಡಲಾಗಿದ್ದು, ಈ ಕಾರ್ಡ್ ಹೊಂದಿರುವ ಅಥವಾ ಗಣತಿಯ ಪಟ್ಟಿಯಲ್ಲಿ ನೋಂದಾಯಿಸಲಾಗಿರುವ ಕೈಮಗ್ಗ ನೇಕಾರರಿಗೆ ತಲಾ 2 ಸಾವಿರ ರೂ. ನಂತೆ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಕೈಮಗ್ಗ ನೇಯ್ಗೆಯಲ್ಲಿ ತೊಡಗಿರುವ ನೇಕಾರರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು, ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಸರ್ಕಾರಿ ಎಸ್.ಜೆ.ಪಿ.ಪಾಲಿಟೆಕ್ನಿಕ್ ಆವರಣ, ಕೆ.ಆರ್.ಸರ್ಕಲ್, ಬೆಂಗಳೂರು-೫೬೦೦೦೧ ರವರಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ ೧೭ರೊಳಗೆ ಅರ್ಜಿ ಸಲ್ಲಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com