ರಾಜ್ಯದ ವಿವಿಧೆಡೆ ಭ್ರಷ್ಟರಿಗೆ ಶಾಕ್! ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಕಡತ ಪರಿಶೀಲನೆ

ಸೂರ್ಯ ನಗರಿ ಕಲಬುರಗಿಯಲ್ಲಿ ಹಾಗೂ ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದೆ.
ಭ್ರಷ್ಟಾಚಾರ ನಿಗ್ರಹ ದಳ
ಭ್ರಷ್ಟಾಚಾರ ನಿಗ್ರಹ ದಳ
Updated on

ಕಲಬುರಗಿ: ಸೂರ್ಯ ನಗರಿ ಕಲಬುರಗಿಯಲ್ಲಿ ಹಾಗೂ ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದೆ.

ಅದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದಡಿ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಕಲಬುರಗಿ ಮತ್ತು ಯಾದಗಿರಿ ವ್ಯವಸ್ಥಾಪಕ ಜಗದೇವಪ್ಪ ಮುಗುಟ ಮನೆ ಮೇಲೆ ದಾಳಿ ಎಸಿಬಿ ದಾಳಿ ಮಾಡಿದೆ.

ಜಗದೇವಪ್ಪ ಅವರ ಕಲಬುರಗಿಯ ಮನೆ , ಕಾಂಪ್ಲೆಕ್ಸ್ , ಯಾದಗಿರಿ ಕಚೇರಿ‌ ಸೇರಿ ಬೀದರ್ ಮನೆ ಮೇಲೆ ಏಕಕಾಲದಲ್ಲಿ ಕಲಬುರಗಿ ಮತ್ತು ಯಾದಗಿರಿ ಡಿವೈಎಸ್ಪಿ ಗಳ ನೇತೃತ್ವದ ತಂಡ ದಾಳಿ ಮಾಡಿದೆ.

ಕುಂದಾನಗರಿ ಬೆಳಗಾವಿಯಲ್ಲಿ ಎಸಿಬಿ ದಾಳಿ

ಬೆಳಗಾವಿ: ಕಲಬುರಗಿ ಮಾತ್ರವಲ್ಲದೆ ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಸುಭಾಷ್​ ಉಪ್ಪಾರ ಅವರ ಮನೆ ಹಾಗೂ ಕಚೇರಿ ಹಾಗೂ ಸಂಬಂಧಿಗಳ ಮೇಲೆ ಸಹ ಎಸಿಬಿ ಅಧಿಕಾರಿಗಳೂ ದಾಳಿ ನಡೆಸಿದ್ದಾರೆ, ನಗರದ ನಾಲ್ಕು ಬೇರೆ ಬೇರೆ ಕಡೆ ದಾಳಿ ನಡೆದಿದೆ. 

ಎಸಿಬಿ ಎಸ್‌ಪಿ ಬಿ.ಎಸ್.ನೇಮಗೌಡರ ನೇತೃತ್ವದ ತಂಡ ಬೆಳಗಾವಿಯ ರುಕ್ಮಿಣಿ ನಗರದ ಮನೆ, ಕಚೇರಿ, ಬಾಡಿಗೆ ಮನೆ ಹಾಗೂ ಬಸವನ ಕುಡಚಿಯಲ್ಲಿರುವ ಅಳಿಯ ಸದಾನಂದ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com