ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ ಸೈಟ್ ರದ್ದುಗೊಳಿಸಿದ ಬಿಡಿಎ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಅಸಾರಾಂ ಬಾಪು
ಅಸಾರಾಂ ಬಾಪು
Updated on

ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

2004ರಲ್ಲಿ  ಧರ್ಮಸಿಂಗ್ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬನಶಂಕರಿ 2ನೇ ಹಂತದಲ್ಲಿ ಅಸಾರಾಂ ಬಾಪು ಆಶ್ರಮದ ಕಟ್ಟಡ ನಿರ್ಮಾಣಕ್ಕೆ ಸಿಎ ಸೈಟ್‌ ನೀಡಿತ್ತು. 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಇದನ್ನು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು 2014ರಲ್ಲಿ ಈ ನಿವೇಶನದಲ್ಲಿ 3 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸಾಯ್ ದತ್ತ ಎಂಬುವರು. ಆಶ್ರಮ ಬಿಡಿಎ ಒಪ್ಪಂದದ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದೆ ಎಂದು ದೂರು ನೀಡಿದ್ದರು.

ಸುಮಾರು 4,2 ಕೋಟಿ ರು ಮೌಲ್ಯದ ಜಾಗ ಇದಾಗಿದ್ದು ಧಾರ್ಮಿಕ ಕಾರ್ಯಕ್ರಮಗಳ ಉಪಯೋಗಕ್ಕಾಗಿ ನೀಡಿದ್ದ 6 ಸಾವಿರ ಅಡಿ ಅಳತೆಯನಿವೇಶನದಲ್ಲಿ ಆಯುರ್ವೇದ ಔಷಧ ಮಾರಾಟ ಮಾಡಲಾಗುತ್ತಿದೆ.

ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ್ದ ಜಾಗದಲ್ಲಿ ಬಿಡಿಎ ನಿಯಮಗಳ ಉಲ್ಲಂಘನೆಯಾಗುತ್ತಿದೆ. ಸಿಎ ನಿವೇಶನ ಹಂಚಿಕೆಯನ್ನು ರದ್ದುಗೊಳಿಸಬೇಕು. ಕಟ್ಟಡವನ್ನು ಬಿಡಿಎ ವಶಕ್ಕೆ ಪಡೆದುಕೊಂಡು ಬೇರೆ ಸಂಸ್ಥೆಗೆ ನೀಡಬಹುದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ನಿವೇಶನ ಹಂಚಿಕೆಯನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದೆ.  ಈ ಸಂಬಂಧ ರದ್ಧತಿ ನೋಟೀಸ್  ನೀಡಲು ಕ್ರಮ ಕೈಗೊಳ್ಳಲಾಗಿದೆ.

ಸ್ವಯಂ ಘೋಷಿತ ದೇವಮಾನದ ಅಸಾರಾಂ ಬಾಪು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿ. ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com