ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು, ಕೊಲ್ಕತ್ತಾದಲ್ಲಿ ಅತ್ತೆಯನ್ನೂ ಕೊಲೆಗೈದು ಉದ್ಯಮಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದ ಟೆಕ್ಕಿಯೊಬ್ಬ ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಮಿತ್‌ ಎಂಬಾ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬ ಕುಟುಂಬ ಕಲಹದಿಂದ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದ ಉದ್ಯಮಿಯೊಬ್ಬ ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಕುಟುಂಬ ಕಲಹದಿಂದ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ನಂತರ ವಿಮಾನದ ಮೂಲಕ ಕೋಲ್ಕತ್ತಾಗೆ ತೆರಳಿ ಅಲ್ಲಿ ಅತ್ತೆಯನ್ನು ಗುಂಡಿಕ್ಕಿ ಕೊಂದು ನಂತರ ತಾನೂ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿರುವ ಭಯಾನಕ ಸರಣಿ ಕೊಲೆ ಘಟನೆ ವರದಿಯಾಗಿದೆ.

42 ವರ್ಷದ ಅಮಿತ್ ಅಗರ್ವಾಲ್ ತನ್ನ ಪತ್ನಿ ಶಿಲ್ಪಿ ಧಂಧಾನಿಯಾ ಅವರನ್ನು ಬೆಂಗಳೂರಿನ ಮಹದೇವಪುರ ನಿವಾಸದಲ್ಲಿ ಕೊಲೆ ಮಾಡಿದ್ದಾನೆ. ನಂತರ ಕೋಲ್ಕತ್ತಾಗೆ ಹೋಗಿ ಅತ್ತೆ ಲಲಿತ ಧಂಧಾನಿಯಾ ಅವರನ್ನು ಶೂಟ್ ಮಾಡಿ ಕೊಂದಿದ್ದಾನೆ. ನಂತರ ತಾನೂ ಅದೇ ಪಿಸ್ತೂಲ್‌ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಲ್ಕೊತ್ತಾ ಪೊಲೀಸರ ಮಾಹಿತಿ ಮೇರೆಗೆ ಮಹಾದೇವಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಆತ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ, ಶಿಲ್ಪಿ ಅಗರ್ ವಾಲ್ ಮೃತದೇಹ ಅಡುಕೋಣೆಯಲ್ಲಿ ಬಿದ್ದಿರುವುದನ್ನ ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ.

ವೇಳೆ ಪೊಲೀಸರು ಮನೆ ಸುತ್ತ ಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ಅಮಿತ್‌ ಬ್ಯಾಗಿನಲ್ಲಿ ಮರಣ ಪತ್ರ ಸಿಕ್ಕಿದೆ. ಇದರಲ್ಲಿ ತನ್ನ ಪತ್ನಿಯನ್ನ ಕೊಂದಿರುವುದಾಗಿ ಅಮಿತ್‌ ತಿಳಿಸಿದ್ದ. ಸದ್ಯ ಬೆಂಗಳೂರು ಹಾಗೂ ಕೊಲ್ಕತ್ತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಾಥಮಿಕವಾಗಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com