ಕಲಬುರ್ಗಿಗೆ 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 
ಸಚಿವ ಭೈರತಿ ಬಸವರಾಜ್
ಸಚಿವ ಭೈರತಿ ಬಸವರಾಜ್
Updated on

ಕಲಬುರ್ಗಿ: ಕಲಬುರ್ಗಿ ನಗರಕ್ಕೆ 837 ಕೋಟಿ ರೂಪಾಯಿ ಕುಡಿಯುವ ನೀರಿನ ಯೋಜನೆಕಲಬುರ್ಗಿ ನಗರಕ್ಕೆ 24x7 ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. 

ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು, 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಜಲ ಶುದ್ಧೀಕರಣ ಘಟಕದಲ್ಲಿಯೂ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುವುದು ಎಂದರು.

ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ. ನೀರನ್ನು ಕಲಬುರ್ಗಿಯ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಮತ್ತು ಅಪ್ಪನ ಕೆರೆ ತುಂಬಿಸಲು ಬಳಕೆ ಮಾಡಿಕೊಳ್ಳಲಾಗುವುದು. 10 ಕೋಟಿ ರೂಪಾಯಿ ವೆಚ್ಚದಲ್ಲಿ ಅಪ್ಪನ ಕೆರೆ ಸೌಂದರೀಕರಣ ಮಾಡಲಾಗುವುದು. ಸಚಿವನಾಗಿ ಯಾವ ಕಾರಣಕ್ಕೂ ಮಲಗುವ ಕೆಲಸ ಮಾಡಲ್ಲ. ಏನೆಲ್ಲ ಕಾಮಗಾರಿಗಳಿವೆಯೋ ಅವೆಲ್ಲಕ್ಕೂ ವೇಗ ನೀಡಲಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸೋ ಲೇಔಟ್ ಗಳಲ್ಲಿ ಶೇ 5 ರಷ್ಟು ನಿವೇಶನ ಪತ್ರಕರ್ತರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com