ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಮೂವರು ದುರ್ಮರಣ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವರು ಮಸಣ ಸೇರಿದರು!

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ.
ಅಪಘಾತ
ಅಪಘಾತ
Updated on

ಕೋಲಾರ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ.

25 ವರ್ಷದ ಯಲ್ಲಯ್ಯ, 24 ವರ್ಷದ ಮತ್ತು ವೆಂಕಟೇಶಯ್ಯ ಮೃತ ಬೈಕ್ ಸವಾರರು. ಮೃತರೆಲ್ಲರೂ ಹೊಗಳಗೆರೆ ಗಾಂಧಿ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಕೂಲಿ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com