ಬೆಂಗಳೂರು: ಬೆಂಗಳೂರಿನ ಆಡುಗೋಡಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮೂಲಕ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಣ್ಣ ಪ್ರಮಾಣದ ಸ್ಫೋಟ ಎಂದು ಸ್ಪಷ್ಟನೆ ನೀಡಿದ್ದಾರೆ.
ಗ್ರಾನೈಟ್ ಕತ್ತರಿಸುವುದಕ್ಕೆ ಉಪಯೋಗಿಸುವ ಕೆಮಿಕಲ್ ದ್ರವವನ್ನು ಎಸೆದಿದ್ದರ ಪರಿಣಾಮವಾಗಿ ಈ ಸ್ಫೋಟ ಸಂಭವಿಸಿದ್ದು, ಹೆದರುವ, ಆತಂಕಪಡುವ ಅಗತ್ಯವಿಲ್ಲವೆಂದು ಆಯುಕ್ತರು ಹೇಳಿದ್ದಾರೆ.
Advertisement