ಬೆಂಗಳೂರು: ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಈ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ.
Advertisement