ಕೊಕ್ಕರೆಗಳ ಸಾಮೂಹಿಕ ಸಾವು: ಮೈಸೂರಿನಲ್ಲಿ ಹೆಚ್ಚಿದ ಆತಂಕ

ನೆರೆ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಆರಂಭವಾಗಿರುವ ಬೆನ್ನಲ್ಲೇ ಮೈಸೂರಿನ ವಿದ್ಯಾರಣ್ಯಪುರದಲ್ಲಿ ಕೊಕ್ಕರಗಳೂ ಇದ್ದಕ್ಕಿದ್ದಂತೆ ಸಾಮೂಹಿಕವಾಗಿ ಸಾವನ್ನಪ್ಪಿದ್ದು, ಪರಿಣಾಮ ಜನತೆಯಲ್ಲಿ ಆತಂಕ ಹೆಚ್ಚಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಆರಂಭವಾಗಿರುವ ಬೆನ್ನಲ್ಲೇ ಮೈಸೂರಿನ ವಿದ್ಯಾರಣ್ಯಪುರದಲ್ಲಿ ಕೊಕ್ಕರಗಳೂ ಇದ್ದಕ್ಕಿದ್ದಂತೆ ಸಾಮೂಹಿಕವಾಗಿ ಸಾವನ್ನಪ್ಪಿದ್ದು, ಪರಿಣಾಮ ಜನತೆಯಲ್ಲಿ ಆತಂಕ ಹೆಚ್ಚಾಗಿದೆ. 

ವಿದ್ಯಾರಣ್ಯಪುರಂನ 5ನೇ ಮುಖ್ಯ ರಸ್ತೆಯಲ್ಲಿ ಈ ವರೆಗೂ ಕಳೆದ 1 ವಾರದಿಂದ 12ಕ್ಕೂ ಹೆಚ್ಚು ಕೊಕ್ಕರೆಗಳು ಸಾವನ್ನಪ್ಪಿದ್ದು, ಸಾವಿಗೆ ಕಾರಣಗಳು ತಿಳಿದುಬಂದಿಲ್ಲ. 

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿರುವ ಪಾಲಿಕೆ ಸದಸ್ಯ ರಾಮಪ್ರಸಾದ ಅವರು, ಪಶುವೈದ್ಯ ಡಾ.ನಾಗರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪಶುವೈದ್ಯ ಕೂಡ ಸ್ಥಳಕ್ಕೆ ಧಾವಿಸಿ, ಮೃತ ಕೊಕ್ಕರೆ ಶವಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ತಪಾಸಣೆಗೆ ಕಳುಹಿಸಿದ್ದಾರೆ.
 
ಮೈಸೂರಿನಲ್ಲಿ ವಿಶ್ವವಿಖ್ಯಾತ ಮೃಗಾಲಯವಿದ್ದು, ಇತರೆ ಪ್ರಾಣಿ, ಪಕ್ಷಿಗಳಿಗೆ ಈ ಕೊಕ್ಕರೆಗಳಿಗೆ ತಗುಲಿರುವ ಸೋಂಕು ಮೃಗಾಲಯದ ಪಕ್ಷಿಗಳಿಗೂ ತಗುಲದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಪಶುವೈದ್ಯರು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com