ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!

ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್​ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.
ಸಂಜಯ್ ಸಹಾಯ್
ಸಂಜಯ್ ಸಹಾಯ್
Updated on

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್​ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.

'ಕರ್ನಾಟಕದ ಸಿಂಗಂ' ಎಂದೇ ಹೆಸರಾಗಿದ್ದ ಪೊಲೀಸ್ ಅಧಿಕಾರಿ ಅಣ್ಣಾಮಲೈ ಕಳೆದ ವರ್ಷ ಮೇ ತಿಂಗಳಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ್ದರು. 

ಇದೀಗ ಕರ್ನಾಟಕ ರಾಜ್ಯ ಗಣಕ ಪರಿಷತ್ ಎಡಿಜಿಪಿಯಾಗಿರುವ ಸಂಜಯ್ ಸಹಾಯ್ ಸ್ವಯಂನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅನುಮತಿ‌ ಕೂಡ ನೀಡಿದೆ. ಮಾ. 31ರವರೆಗೆಸಂಜಯ್ ಸಹಾಯ್ ಕರ್ತವ್ಯ ನಿರ್ವಹಿಸಲಿದ್ದಾರೆ.

ರಾಜ್ಯ ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿ ಆಗಿರುವ ಸಂಜಯ್ ಸಹಾಯ್ 1989ರ ಬ್ಯಾಚ್​ನ ಐಪಿಎಸ್ ಅಧಿಕಾರಿ. ಇವರ ಸ್ವಯಂ ನಿವೃತ್ತಿಯ ನಿರ್ಧಾರಕ್ಕೆ ಕಲಂ 16(2) DCRB ನಿಯಮದಂತೆ ರಾಜ್ಯ ಸರ್ಕಾರ ಅನುಮತಿ ನೀಡಿ, ಆದೇಶ ಹೊರಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com