ಹೊಸಪೇಟೆ: ಕಾಲುವೆಯಲ್ಲಿ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರುಪಾಲು!

ಕಾಲುವೆಯಲ್ಲಿ ಜಾರಿ ಹೋಗುತಿದ್ದ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿರುವ ಘಟನೆ ಹೊಸಪೇಟೆಯಲ್ಲಿ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಸಪೇಟೆ: ಕಾಲುವೆಯಲ್ಲಿ ಜಾರಿ ಹೋಗುತಿದ್ದ ಬಕೆಟ್ ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿರುವ ಘಟನೆ ಹೊಸಪೇಟೆಯಲ್ಲಿ ಭಾನುವಾರ ನಡೆದಿದೆ.

ಹೊಸಪೇಟೆ ನಗರದ ರೈಲ್ವೇ ಸ್ಟೇಷನ್ ಬಳಿಯ ಹೆಚ್.ಎಲ್.ಸಿ.ಕಾಲುವೆಯಲ್ಲಿ ಈ ಘಟನೆ ನಡೆದಿದ್ದು, ಹೆಂಡತಿಯ ಜೊತೆ ಬಟ್ಟೆ ತೊಳೆಯಲು ಕಾಲುವೆಗೆ ಹೋಗಿದ್ದ ಮೃತ ವ್ಯಕ್ತಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು 60ವರ್ಷದ ಶೇಖರಾಚಾರ್ಯ ಎಂದು ಗುರುತಿಸಲಾಗಿದೆ. ಹೊಸಪೇಟೆ ಗಚಿತ್ವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com